ರೈತರಿಗೆ ಬಂಪರ್ ಕೊಡುಗೆ! ಕರ್ನಾಟಕ ಬಜೆಟ್ ನೋಡಿ!
ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಆಯವ್ಯಯ
ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿಗಳು ಪರಸ್ಪರ ಪೂರಕವಾಗಿ ದುಡಿಯುವ ಕಾರ್ಯಕ್ಷೇತ್ರಗಳು. ಇವುಗಳ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ರೈತರು, ಮೀನುಗಾರರು ಮುಂತಾದವರ ಆದಾಯ ಹೆಚ್ಚಿಸುವ ಈ ಯೋಜನೆಗಳು ಭವಿಷ್ಯದ ಕರ್ನಾಟಕದ ಆರ್ಥಿಕಾಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿವೆ. ಕೃಷಿ ಮತ್ತು ಇನ್ನಿತರೆ ಆಸ್ತಿಗಳ ದಾಖಲೀಕರಣ, ಮೂಲಸೌಲಭ್ಯ ಒದಗಿಸುವಿಕೆ, ಸಮರ್ಪಕ ವಿದ್ಯುತ್ ಪೂರೈಕೆ, ಗೋದಾಮುಗಳ ಒದಗಿಸುವಿಕೆ ಮುಂತಾದ ಚಟುವಟಿಕೆಗಳ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಹಾಗೂ ಗ್ರಾಮೀಣ ಜನರ ಆದಾಯ ಹೆಚ್ಚಿಸಲು ಶ್ರಮಿಸಲಾಗುವುದು.
ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನವನ್ನು ಒದಗಿಸಲಾಗುವುದು. 20/196
ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ, ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ಉದ್ದೇಶಿಸಿದೆ. ಈ ಮೂಲಕ ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಒದಗಿಸಲಾಗುವುದು.
ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್ಕ್ಯೂಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.
ಕೃಷಿ ಭಾಗ್ಯ
ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡಗಳನ್ನು ನಿರ್ಮಿಸಿ ಮಳೆಯಾಶ್ರಿತ ಕೃಷಿ ಪ್ರದೇಶದ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದರೊಂದಿಗೆ ರೈತರ 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಕಲ್ಪಿಸಲಾಗುವುದು.
ಕೃಷಿ
1.ಜೈವಿಕ ಕೃಷಿ ಪರಿಕರ ಸ್ಟಾರ್ಟ್-ಅಪ್ಗಳು (Agri Start-up) ಉತ್ಪಾದಿಸುವ ಜೈವಿಕ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ದರದಲ್ಲಿ ಮಾರಾಟ ಮಾಡಲು ಉತ್ತೇಜಿಸಲಾಗುವುದು.
2.ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಯಡಿ ಈವರೆಗೆ ಒಟ್ಟಾರೆ 12.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭೂ-ಸಂಪನ್ಮೂಲ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಭೂ-ಸಂಪನ್ಮೂಲ ಸಮೀಕ್ಷೆ ಆಧಾರದ ಮೇಲೆ ರೈತರು ಸೂಕ್ತವಾದ ಬೆಳೆಗಳನ್ನು ಬೆಳೆಯಲು, ಅಗತ್ಯವಿರುವ ರಾಸಾಯನಿಕ ಗೊಬ್ಬರ ಹಾಗೂ ಪೋಷಕಾಂಶಗಳನ್ನು ಬಳಸಿ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸಲಾಗುವುದು.
3.ಮಂಡ್ಯ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಈಗಾಗಲೇ ಅನುಮೋದನೆ ನೀಡಿದ್ದು, ಮೂಲಸೌಕರ್ಯ ಕಲ್ಪಿಸಲು 25 ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲಾಗುವುದು.
1.ರೈತರಿಗೆ ಹೆಚ್ಚಿನ ಆದಾಯ ಒದಗಿಸುವಲ್ಲಿ ತೋಟಗಾರಿಕಾ ಬೆಳೆಗಳ ಕೊಡುಗೆ ಮಹತ್ವದ್ದಾಗಿದೆ. ಇತ್ತೀಚಿನ ಬೆಳೆ ಪದ್ಧತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ತಂತ್ರಜ್ಞಾನದಲ್ಲಾದ ಆಧುನೀಕರಣದ ಅನುಕೂಲವನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಅನ್ನು ಜಾರಿಗೊಳಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ 95 ಕೋಟಿ ರೂ. ಅನುದಾನ ಒದಗಿಸಿದೆ. 2.ತೋಟಗಾರಿಕಾ ಬೆಳೆಗಳ ವಿಸ್ತೀರ್ಣ, ಉತ್ಪಾದನೆ, ಬೆಳೆಗಳ ಆರೋಗ್ಯ, ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ನೈಜ ಸಮಯದ (Real Time) ಆಧಾರದ ಮೇಲೆ ರೈತರಿಗೆ ಮಾಹಿತಿ ಒದಗಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಟೆಕ್ನಾಲಜಿ ಮತ್ತು ಖಾಸಗಿ ಸಹಯೋಗದಲ್ಲಿ ಜ್ಞಾನ ಕೋಶ ಸಾಪಿಸಲಾಗುವುದು. 1.ಅಂತಾರಾಷ್ಟ್ರೀಯ ದರ್ಜೆಯ ದ್ವಿತಳಿ ಕಚ್ಚಾ ರೇಷ್ಮೆಯ ದೇಶೀಯ ಬೇಡಿಕೆಯನ್ನು ಪೂರೈಸಲು ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು. 2.ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್ ರೇಷ್ಮೆ ಗೂಡಿನ ಮಾರಕಟ್ಟೆಯ ಮೊದಲನೇ ಹಂತದ ಕಾಮಗಾರಿಗಳು ಮುಕ್ತಾಯಗೊಳ್ಳಲಿದ್ದು, ಪ್ರಸಕ್ತ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು 250 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. 3.ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆಯನ್ನು NABARD ಸಹಯೋಗದಲ್ಲಿ ಸ್ಥಾಪಿಸಲಾಗುವುದು. 1.ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3.500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗುವುದು. 2.ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದ್ದು, 2025-26 ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು. 3.2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್ ಸಹಯೋಗದೊಂದಿಗೆ ನಿರ್ಮಿಸಲಾಗುವುದು. 4.ಅಮೃತ್ ಮಹಲ್ ಕಾವಲುಗಳಲ್ಲಿನ ಭೂ ಒತ್ತುವರಿ ತಡೆಯಲು ಹಾಗೂ ಅಮೃತ್ ಮಹಲ್ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು, ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿಗೊಳಿಸಲಾಗುವುದು. 5.ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್, ಕಿಲಾರಿ, ಅಮೃತ್ ಮಹಲ್ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು. 6.ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಲಸೆ ಕುರಿಗಾರರಿಗೆ ಕರ್ನಾಟಕ ಪಶುವೈದ್ಯಕೀಯ. 7.ನಮ್ಮ ಸರ್ಕಾರವು ಅಸ್ತಿತ್ವಕ್ಕೆ ಬಂದ ನಂತರ “ನಂದಿನಿ” ಬ್ರಾಂಡ್ನ ಮಾರುಕಟ್ಟೆಯನ್ನು ವಿಸ್ತರಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದೆ. 2024-25ನೇ ಸಾಲಿನಲ್ಲಿ ಪ್ರತಿ ಒಂದು ಕೋಟಿಗೂ ಹೆಚ್ಚು ಲೀಟರ್ ಹಾಲನ್ನು ಶೇಖರಿಸಲಾಗಿದೆ.ರೇಷ್ಮೆ
ಪಶು ಸಂಗೋಪನೆ